ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಬಿಜೆಪಿ ಸಂಸದ ಪಿ.ಸಿ.ಮೋಹನ್ ತಮ್ಮ 4ನೇ ಗೆಲುವಿನ ವಿಶ್ವಾಸ!
ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಬಿಜೆಪಿ ಸಂಸದ ಪಿ.ಸಿ.ಮೋಹನ್ ತಮ್ಮ 4ನೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಅವರು ಮನೆ ಮನೆಗೆ ತೆರಳಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಮರು ಆಯ್ಕೆಯಾದರೆ ಜನರಿಗೆ ನೀವು ನೀಡುವ ಭರವಸೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಮತ್ತು ಎನ್ಡಿಎ ಸರ್ಕಾರ ಪ್ರತಿಯೊಂದು ಕಾರ್ಯಕ್ರಮಗಳು ಮತ್ತು ಉಪಕ್ರಮಗಳು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹಾಗೂ ಆರ್ಡಬ್ಲೂಎ ಮಟ್ಟದಲ್ಲಿ ಉತ್ತಮ ಆಡಳಿತವನ್ನು ಸುಗಮಗೊಳಿಸುವುದು. ನಗರ ಭೂದೃಶ್ಯಗಳನ್ನು ಹೆಚ್ಚಿಸುವ ಮತ್ತು ಜೀವನ ಶಾಂತಿಯನ್ನು ಖಾತ್ರಿಪಡಿಸುವ ನೀತಿಯನ್ನು ಜಾರಿಗೆ ತರುವುದು. ಕೇಂದ್ರ ಸರ್ಕಾರದ ಯೋಜನೆಗಳು ಜನರ ಹಿತದೃಷ್ಟಿಗಾಗಿ ತಂದಿದ್ದು ಅದನ್ನು ಅನುಷ್ಠಾನಗೊಳಿಸಿ, ಜನರಿಗೆ ಪೂರ್ಣ ಪ್ರಮಾಣದಲ್ಲಿ ತಲುಪಿಸುವ ಉದ್ದೇಶವಿದೆ.
ಅಷ್ಟೇ ಅಲ್ಲದೆ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರಿಗೆ ಮೂಲಸೌಕರ್ಯವನ್ನು ಹೆಚ್ಚಿಸುವುದು ನನ್ನ ಗುರಿ ಮತ್ತು ಮೊದಲ ಆದಯತೆ ಎಂದು ಭರವಸೆ ಮಾತುಗಳನ್ನಾಡಿದರು.
ಅಂದಹಾಗೆ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡನೇ ಮತ್ತು ಮೂರನೇ ಹಂತದ ಮತದಾನ ನಡೆಯಲಿದೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್ 1, ಪಕ್ಷೇತರ 1 ಸ್ಥಾನ ಗೆದ್ದಿತ್ತು. ಆದರೆ ಈ ಬಾರಿಯ ಚುನಾವಣೆಯ ಲೆಕ್ಕಾಚಾರಗಳು ಏನಾಗಬಹುದು ಎಂಬ ಕುತೂಹಲ ಇದೆ.